ಹೊಸದಿಗಂತ ವರದಿ ಮಡಿಕೇರಿ :
ಕರ್ನಾಟಕ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರ ಸರ್ಪಗಾವಲಿದ್ದು, ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 5.5ಲಕ್ಷ ರೂ.ಗಳನ್ನು ಮಂಗಳವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಈ ಹಣ ಪತ್ತೆಯಾಗಿದ್ದು, ಎರಡು ಬೈಕ್ ಹಾಗೂ ಒಂದು ಟ್ರಕ್’ನಲ್ಲಿ ದಾಖಲೆ ರಹಿತವಾಗಿ ಈ ಹಣವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.