ಹೊಸದಿಗಂತ ಡಿಜಿಟಲ್ ಡೆಸ್ಕ್
ತಮಿಳುನಾಡಿನ ಸೌಂದರ್ಯ ಸ್ಪರ್ಧೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲೇ ರ್ಯಾಂಪ್ ವಾಕ್ ಮಾಡಿದ ಇನ್ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಿ ವರ್ಗಾವಣೆ ಮಾಡಲಾಗಿದೆ.
ಮಯೂರಾಮಾಡೆಲಿಂಗ್ ಏಜೆನ್ಸಿಯಿಂದ ಇತ್ತೀಚೆಗೆ ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್ ಪಟ್ಟಣದಲ್ಲಿ ಸೌಂದರ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಗೆ ಮುಖ್ಯ ಅತಿಥಿಯಾಗಿ ಖ್ಯಾತ ನಟಿ ಯಶಿಕಾ ಆನಂದ್ ಭಾಗವಹಿಸಿದ್ದರು.
ಕಾರ್ಯಕ್ರಮದ ಭದ್ರತೆಗೆ ಐವರು ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ಕರ್ತವ್ಯದಲ್ಲಿದ್ದ ಪೊಲೀಸರು ಈ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಕ್ರಮವಹಿಸಿರುವ ನಾಗಪಟ್ಟಣಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾವಗರ್ ಅವರು, ರ್ಯಾಂಪ್ ವಾಕ್ ನಲ್ಲಿ ಪಾಲ್ಗೊಂಡಿದ್ದ ಸೆಂಬನಾರ್ಕೋವಿಲ್ ಠಾಣೆಯ ಇನ್ಸ್ಪೆಕ್ಟರ್ ಸುಬ್ರಮಣ್ಯಂ, ಅಶ್ವಿನಿ, ನಿತ್ಯಶೀಲಾ, ರೇಣುಕಾ ಮತ್ತು ಶಿವನೇಸನ್ ಎಂಬ ನಾಲ್ಕು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿ ಶಿಸ್ತು ಕ್ರಮ ಕೈಗೊಂಡಿದ್ದಾರೆ.
ಸ್ಪರ್ಧೆಯ ಆಯೋಜಕರು ಹಾಗೂ ಜನರ ಒತ್ತಾಯಕ್ಕೆ ಮಣಿದು ಪೊಲೀಸರು ರ್ಯಾಂಪ್ ವಾಕ್ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ