ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ, ಮುಂದುವರೆಸಿ: ಹೆಚ್​​​ಡಿ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಬಸ್‌ಗಳ ಟಿಕೆಟ್ ದರವನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಖಾತರಿ ಯೋಜನೆ ನಿಲ್ಲಿಸಲು ರಾಜ್ಯ ಸರ್ಕಾರ ಕಾರಣ ಹುಡುಕುತ್ತಿದೆ. ಗ್ಯಾರಂಟಿಯನ್ನು ಕೊನೆಗೊಳಿಸಲು ಅವರು ಇನ್ನೂ ಕಾರಣವನ್ನು ಹುಡುಕುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸುವುದು ಬೇಡ ಎಂದು ಜನ ಹೇಳುತ್ತಿದ್ದಾರೆ.

ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

ಆದರೆ, ಜನರಿಂದಲೇ ಕಿತ್ತುಕೊಂಡು ಅವರಿಗೆ ಕೊಡುವ ಕೆಲಸ ಮಾಡಬಾರದು. ಅತ್ತೆಯ ಆಸ್ತಿಯನ್ನು ಅಳಿಯ ದಾನ ಮಾಡಿದ ಎನ್ನುವ ಮಾತಿನಂತೆ ಜನರಿಂದ ಕಿತ್ತುಕೊಂಡು ಅವರಿಗೆ ಕೊಡುವುದಕ್ಕೆ ಇವರೇ ಬೇಕಾ? ಎಂದು ಹೆಚ್​​​ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!