ಮುಂದಿನ ಬಜೆಟ್ ನಲ್ಲಿ ಕೆ.ಕೆ.ಆರ್.ಡಿ.ಬಿ.ಗೆ 5 ಸಾವಿರ ಕೋಟಿ ರೂಪಾಯಿ ಅನುದಾನ-ಸಿಎಂ ಘೋಷಣೆ

ಹೊಸದಿಗಂತ ವರದಿ ಕಲಬುರಗಿ:

ಮುಂದಿನ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಐದು ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.

ಕಲಬುರಗಿಯ ಎನ್.ವಿ.ಮೈದಾನದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ, 3 ಸಾವಿರ ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಳೆದ ಬಜೆಟ್ ನಲ್ಲಿ ಮೂರು ಸಾವಿರ ಕೋಟಿ ನೀಡಿದ್ದೆ. ಮುಂದಿನ ಬಜೆಟ್ ನಲ್ಲಿ 5 ಸಾವಿರಕ್ಕೆ ಹೆಚ್ಚಿಸುವುದಾಗಿ ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್ ನೊಳಗೆ ಭರ್ತಿ ಮಾಡುವುದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!