ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ: ಸಿಎಂ ಸಿದ್ದು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿ ಕುಟುಂಬಕ್ಕೆ ಮಾಸಿಕ ಐದು ಸಾವಿರ ರೂ. ಲಭಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದರು.

ಇನ್ನು ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದ್ದು, ಈ ಯೋಜನೆಗೆ ವರ್ಷಕ್ಕೆ 35 ಸಾವಿರ ಕೋಟಿ ರೂ. ವಿನಿಯೋಗಿಸಲಾಗುತ್ತಿದ್ದು ಆ.27ರಂದು ಬೆಳಗಾವಿಯಲ್ಲೇ ಚಾಲನೆ ನೀಡಲಾಗುವುದು ಎಂದಿದ್ದಾರೆ. ಅಲ್ಲದೆ ಗೃಹಜ್ಯೋತಿಯಿಂದ ಕರೆಂಟ್ ಬಿಲ್ ಮೊತ್ತವು ೦೦ ಬಂದಿದ್ದು, ಇದರಿಂದ ಬಡವರಿಗೆ ಪ್ರಯೋಜನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!