ಹೊಸದಿಗಂತ ವರದಿ, ವಿಜಯಪುರ:
ಇಲ್ಲಿನ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಎಫ್’ಡಿಎ ವಿನೋದ ರಾಠೋಡ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಎಫ್ ಡಿ ಎ ವಿನೋದ ರಾಠೋಡ, ಶಿಕ್ಷಕರ ವರ್ಗಾ ವಣೆ ಆರ್ಡರ್ ಕಾಪಿ ಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದು, ಶಿಕ್ಷಕರ ವರ್ಗಾವಣೆ ಆಗಿರುವ ಆದೇಶ ಪ್ರತಿ ಕೊಡಲು 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿಗೈದು ವಶಕ್ಕೆ ಪಡೆದಿದ್ದಾರೆ.
ವಿಜಯಪುರ ಎಸಿಬಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.