ಹೊಸದಿಗಂತ ವರದಿ,ಬನವಾಸಿ:
ಅಡಿಕೆ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು 50 ಲಕ್ಷ ರೂ. ದರೋಡೆ ಮಾಡಿ ಪರಾರಿಯಾದ ಘಟನೆ ಬುಧವಾರ ಸಂಜೆ ಬನವಾಸಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗಾವಿಯಿಂದ ಸಿದ್ಧಾಪುರದತ್ತ ಸಾಗುತಿದ್ದ ಕಾರನ್ನು ಬೇರೊಂದು ಕಾರಿನಲ್ಲಿ ಬಂದು ಸಮೀಪದ ಚನ್ನಗಿರಿ ಬಳಿ ಅಡ್ಡಗಟ್ಟಿ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಬನವಾಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸೂಕ್ತ ಮಾಹಿತಿ ದೊರಕದ ಕಾರಣ ಪ್ರಕರಣವನ್ನು ಪೋಲಿಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.