April 29, 2026
Wednesday, April 29, 2026
spot_img

ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಕೆ.ಪಾಟೀಲ್, ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !