ಹೊಸದಿಗಂತ, ಕೊಪ್ಪಳ:
ಕೊಪ್ಪಳ ಜಿಲ್ಲೆಯಲ್ಲಿ ಕೊಟ್ಟಿ ದಾಖಲೆ ಸೃಷ್ಟಿಸಿ 650 ಕೋಟಿ ರೂಪಾಯಿ ಅವ್ಯವಹಾರ ಮಾಡಿದ ಆರೋಪ ಹಿನ್ನಲೆ 28 ಅಭಿಯಂತರರು ಅಮಾನತಾಗಿದ್ದಾರೆ.
ಅವ್ಯವಹಾರದಲ್ಲಿ ಬಾಗಿಯಾಗಿದ್ದ ಅಧಿಕಾರಿಗಳಿಗೆ ಸರಕಾರ ಕೊನೆಗೂ ಬಿಗ್ ಶಾಕ್ ನೀಡಿದೆ. ಕರ್ನಾಟಕ ನೀರಾವರಿ ನಿಗಮದ 28 ಅಧಿಕಾರಿಗಳನ್ನು ಜಲಸಂಪನ್ಮೂಲ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎನ್ ಹರ್ಷ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.