ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯ ಚುನಾವಣೆ ಟಿಕೆಟ್ ಘೋಷಣೆಗೂ ಮುನ್ನವೇ ಆಕಾಂಕ್ಷಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ಅತ್ತ ಮಂಡ್ಯದಲ್ಲಿ ಟಿಕೆಟ್ ಗೊಂದಲದ ನಡುವೆಯೂ ರೆಬೆಲ್ ಸ್ಟಾರ್ ಪತ್ನಿ ಸುಮಲತಾ ಅಂಬರೀಷ್ ಕಣಕ್ಕಿಳಿದಿದ್ದಾರೆ.
ಮೈತ್ರಿಕೂಟದ ಟಿಕೆಟ್ ಗೊಂದಲದ ನಡುವೆಯೇ ಸುಮಲತಾ ಅಂಬರೀಶ್ ಮಂಡ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಮತ್ತೆ ಮಂಡ್ಯ ಪ್ರವಾಸ ಮಾಡಲಿದ್ದಾರೆ ಎಂಬ ಮಾಹಿತಿ ಇದೆ.
ಸುಮಲತಾ ಅಂಬರೀಶ್ ಕಳೆದ 20 ದಿನಗಳಲ್ಲಿ ಮಂಡ್ಯಕ್ಕೆ ಏಳನೇ ಬಾರಿ ಪ್ರವಾಸ ಕೈಗೊಂಡಿದ್ದಾರೆ. ಮೊನ್ನೆಯಷ್ಟೇ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದಿದ್ದ ಅವರು ಇಂದು ಮಂಡ್ಯ, ಪಾಂಡವಪುರ, ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡಲಿದ್ದಾರೆ ಎನ್ನಲಾಗಿದೆ.