ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಸುಮಲತಾ ಸಹಿತ ಮಂಡ್ಯ ಜಿಲ್ಲೆಯ 7 ಅಭ್ಯರ್ಥಿಗಳು ಅನರ್ಹ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಳೆದ ಲೋಕಸಭಾ ಚುನಾವಣೆಯ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ, ದಿವಂಗತ ನಟ ಅಂಬರೀಶ್​ ಅವರ ಪತ್ನಿ, ಸುಮಲತಾ ಅಂಬರೀಶ್ (Sumalatha Ambarish)​ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು. ಈ ವೇಳೆ ಎದುರಾಳಿಯಾಗಿ ಜೆಡಿಎಸ್​ನಿಂದ (JDS) ನಿಖಿಲ್​ ಕುಮಾರಸ್ವಾಮಿ (Nikhil Kumarswamy) ಸ್ಪರ್ಧಿಸಿದ್ದರು. ಇವರಿಬ್ಬರ ಪ್ರತಿಸ್ಪರ್ಧಿಯಾಗಿ ಸುಮಲತಾ ಎಂಬ ಹೆಸರಿನ ಇನ್ನಿಬ್ಬರು ಸ್ಪರ್ಧೆ ಮಾಡಿದ್ದರು.

ಇದೀಗ ಚುನಾವಣಾ ಆಯೋಗ ಸುಮಲತಾ ಎಂಬ ಹೆಸರಿನ ಇಬ್ಬರು ಅಭ್ಯರ್ಥಿಗಳಿಗಳನ್ನು ಅನರ್ಹಗೊಳಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಖರ್ಚು ವೆಚ್ಚದ ಬಗ್ಗೆ ಸರಿಯಾದ ದಾಖಲಾತಿ ಸಲ್ಲಿಸದ ಹಿನ್ನೆಲೆ ಇಬ್ಬರು ಸುಮಲತಾ ಸೇರಿದಂತೆ ಮಂಡ್ಯ ಜಿಲ್ಲೆಯ 7 ಅಭ್ಯರ್ಥಿಗಳನ್ನ ಡಿಸ್​ಕ್ವಾಲಿಫೈ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಅನರ್ಹಗೊಂಡ ಮಂಡ್ಯದ 7 ಸ್ಪರ್ಧಿಗಳು
ಅರವಿಂದ ಪ್ರೇಮಾನಂದ, ಎನ್​.ಸಿ ಪುಟ್ಟೆಗೌಡ, ಸುಮಲತಾ ಟಿ.ಎಮ್​​ ಹೊಸುರು, ಎಮ್​. ಸುಮಲತಾ, ಎಸ್​​.ಹೆಚ್​. ಲಿಂಗೇಗೌಡ್​, ಕೆ.ಆರ್​. ಶಿವಮಾದೇಗೌಡ, ಬಿಎಸ್​ ಗೌಡ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!