ಯುಪಿಯಲ್ಲಿ ಆಂಬ್ಯುಲೆನ್ಸ್- ಟ್ರಕ್‌ ನಡುವೆ‌ ಭೀಕರ ಅಪಘಾತ; ಏಳು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೆಹಲಿಯಿಂದ ಬರುತ್ತಿದ್ದ ಆಂಬ್ಯುಲೆನ್ಸ್  ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಆರು ಮಂದಿ ಆರೋಗ್ಯ ತಪಾಸಣೆ ಮುಗಿಸಿಕೊಂಡು ದೆಹಲಿಯಿಂದ ಹಿಂತಿರುಗುತ್ತಿದ್ದರು ಎನ್ನಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಸ್ತೆ ಅಪಘಾತದ ಬಗ್ಗೆ ಅಧಿಕಾರಿಗಳನ್ನು ಮಾಹಿತಿ ಪಡೆದು, ಮೃತಪಟ್ಟವರಿಗೆ ಸಂತಪ ಸೂಚಿಸಿದ್ದಾರೆ.

ಫತೇಗಂಜ್‌ನ ಪಶ್ಚಿಮ ಭಾಗದಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಬಂದು ಮುಂದೆ ಬರುತ್ತಿದ್ದ ಡಿಸಿಎಂ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಬರೇಲಿ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ತನಿಖೆ ನಡೆಯುತ್ತಿದ್ದು, ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಂಬ್ಯುಲೆನ್ಸ್ ಚಾಲಕ ನಿದ್ರಿಸಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!