ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಆಶಾ ಕಾರ್ಯಕರ್ತೆಯರನ್ನು ಸಚಿವ ದಿನೇಶ್ ಗುಂಡೂರಾವ್ ಭೇಟಿ ಮಾಡಿದ್ದು, ಬ್ಯಾಂಕ್ ಖಾತೆಗೆ ಐದು ಸಾವಿರ ರೂಪಾಯಿ ಬದಲು ಏಳು ಸಾವಿರ ರೂಮಾಯಿ ಜಮಾ ಮಾಡುವುದಾಗಿ ಆಶ್ವಾಸನೆ ನೀಡಿದರು. ಈಗಲಾದರೂ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.
ಆದರೆ ಇದಕ್ಕೂ ಒಪ್ಪದ ಆಶಾ ಕಾರ್ಯಕರ್ತೆಯರು ಸಿಎಂ ಮಧ್ಯಸ್ಥಿಕೆ ವಹಿಸಿ ನ್ಯಾಯ ಕೊಡಿಸಬೇಕು ಎಂಟು ಪಟ್ಟು ಹಿಡಿದಿದ್ದಾರೆ. 15 ಸಾವಿರ ರೂಪಾಯಿ ಗೌರವ ಧನ ನೀಡಬೇಕು ಎಂದು ಮನವಿ ಮಾಡಿದ್ದಾರೆ.