ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 75ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆಗೆ 7,000 ಜನರಿಗೆ ಆಸನ ವ್ಯವಸ್ಥೆ ಮತ್ತು ಸುರಕ್ಷಿತ ಪಾರ್ಕಿಂಗ್ ಸೇರಿದಂತೆ ಮಾಣಿಕ್ ಷಾ ಪರೇಡ್ ಮೈದಾನವನ್ನು ಸಂಪೂರ್ಣವಾಗಿ ಸಿದ್ಧಪಡಿಸಲಾಗಿದೆ.
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಈ ಸಿದ್ಧತೆ ಕುರಿತು ಮಾಹಿತಿ ನೀಡಿದರು.
575 ಪೊಲೀಸ್ ಅಧಿಕಾರಿಗಳು, 9 ಡಿಸಿಪಿಗಳು, 16 ಎಸಿಪಿಗಳು ಮತ್ತು 46 ಇನ್ಸ್ಪೆಕ್ಟರ್ಗಳು ಸೇರಿದಂತೆ 1000 ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಮಿಲಿಟರಿ ಪಡೆಗಳು ಮತ್ತು ನಾಯಿಗಳೂ ಇವೆ. ಬ್ಯಾಗೇಜ್ ಸ್ಕ್ಯಾನರ್ಗಳು ಮತ್ತು 100 ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಾಹನ ಸಂಚಾರದಲ್ಲೂ ಬದಲಾವಣೆಯಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.