ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ ಉರುಳಿ ಬಿದ್ದ ಪರಿಣಾಮ 8 ಪ್ರಯಾಣಿಕರು ಸಾವನ್ನಪ್ಪಿರುವ ದುರಂತ ಘಟನೆ ಮಧ್ಯ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ನಡೆದಿದೆ.
ಕಠ್ಮಂಡುವಿನಿಂದ ಸುಮಾರು 300 ಕಿಮೀ ದೂರದಲ್ಲಿರುವ ಬೆನಿ-ಹಿಲ್ಲಿ ಜಿಲ್ಲೆಗೆ ತೆರಳುತ್ತಿದ್ದ ಬಸ್ ರಾಜಧಾನಿಯಿಂದ ಸುಮಾರು 60 ಕಿಮೀ ದೂರದಲ್ಲಿರುವ ಗಜೂರಿಯಲ್ಲಿ ಇಂದು ಬೆಳಗ್ಗೆ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಆರು ಪುರುಷರು ಸೇರಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಪ್ರಯಾಣಿಕರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಧಾಡಿಂಗ್ ಎಸ್ಪಿ ಗೌತಮ್ ಮಿಶ್ರಾ ಮಾಹಿತಿ ನೀಡಿದ್ದಾರೆ.