ಅತಿಥಿ ಉಪನ್ಯಾಸಕರಿಗೆ 8000 ರೂ. ಗೌರವ ಧನ ಹೆಚ್ಚಳ ಮಾಡ್ತೇವೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿವ ಎಂ.‌ಸಿ.ಸುಧಾಕರ್ ಹಾಗೂ ಮಾಜಿ ಎಂಎಲ್​ಸಿ ಪುಟ್ಟಣ್ಣ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ರವರನ್ನುಪ್ರತಿಭಟನಾನಿರತ ಅತಿಥಿ ಉಪನ್ಯಾಸಕರ(Guest Lectures) ನಿಯೋಗವು ಇಂದು(ಜ.06) ಭೇಟಿ ಮಾಡಿದ್ದಾರೆ.

ಇದೇ ವೇಳೆ ಮುಷ್ಕರ ಹಿಂಪಡೆಯಲು ಅತಿಥಿ ಉಪನ್ಯಾಸಕರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದು, ಜೊತೆಗೆ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ ನೀಡಿದ್ದಾರೆ.

2023 ಡಿಸೆಂಬರ್ 29 ರಂದು ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಆ ಬಗ್ಗೆ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ‘ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದರು. ಅಷ್ಟಕ್ಕೆ ಸುಮ್ಮನಾಗದ ಉಪನ್ಯಾಸಕರು, ಪುನಃ ಹೋರಾಟ ಆರಂಭಿಸಿದ್ದರು, ಇದೀಗ ಸಿಎಂ, 5 ಸಾವಿರದಿಂದ 8 ಸಾವಿರಕ್ಕೆ ಗೌರವಧನ ಹೆಚ್ಚಿಸಿದ್ದಾರೆ.

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಖಾಯಂ ಅವರ ಪ್ರಮುಖ ಬೇಡಿಕೆ ಆಗಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸುಧಾಕರ್​ ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!