March 14, 2026
Saturday, March 14, 2026
spot_img

ಬಾಂಗ್ಲಾ ಜೈಲಿನಲ್ಲಿದ್ದ ಆಂಧ್ರದ 9 ಮೀನುಗಾರರು ಭಾರತಕ್ಕೆ ವಾಪಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ಬಂಧನದಲ್ಲಿದ್ದ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ 9 ಮೀನುಗಾರರು ಸ್ವದೇಶಕ್ಕೆ ಮರಳಿದ್ದಾರೆ.

ಜನವರಿ 29ರಂದು ಬಾಂಗ್ಲಾದೇಶದ ಕೋಸ್ಟ್ ಗಾರ್ಡ್ ಮೀನುಗಾರರನ್ನು ಭಾರತದ ಕೋಸ್ಟ್​ ಗಾರ್ಡ್​ಗೆ ಹಸ್ತಾಂತರಿಸಲಾಯಿತು. ನಂತರ ಅವರು ಅವರನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದರು.

ಕಳೆದ 3 ತಿಂಗಳಿನಿಂದ ಅಂದರೆ 2025ರ ಅಕ್ಟೋಬರ್‌ನಲ್ಲಿ ಮೀನುಗಾರಿಕೆಗೆ ಹೋಗಿದ್ದ 9 ಮೀನುಗಾರರು ಬಂಗಾಳಕೊಲ್ಲಿಯಲ್ಲಿ ಮೀನುಗಾರಿಕೆ ಮಾಡುವಾಗ ಅಜಾಗರೂಕತೆಯಿಂದ ಸಮುದ್ರದ ಗಡಿಯನ್ನು ದಾಟಿದ್ದರು. ಹೀಗಾಗಿ, ಬಾಂಗ್ಲಾದೇಶದ ನೌಕಾಪಡೆಯ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ನಂತರ ಅವರನ್ನು ಬಗೇರ್‌ಹಟ್ ಜೈಲಿನಲ್ಲಿ ಇರಿಸಲಾಗಿತ್ತು.

ಇದೀಗ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಮಾತುಕತೆಗಳ ನಂತರ ಮೀನುಗಾರರನ್ನು ಬಿಡುಗಡೆ ಮಾಡಲಾಯಿತು.

ಬಾಂಗ್ಲಾದೇಶದಿಂದ ಬಿಡುಗಡೆಯಾದ ಮೀನುಗಾರರನ್ನು ಮರುಪಲ್ಲಿ ಚಿನ್ನಪ್ಪಣ್ಣ, ರಮೇಶ್ ಅಪ್ಪಲಕೊಂಡ, ಪ್ರವೀಣ್, ರಾಮು, ನಕ್ಕ ರಾಮು, ಸೀತಯ್ಯ ಎಂದು ಗುರುತಿಸಲಾಗಿದೆ. ಅವರಲ್ಲಿ 6 ಮಂದಿ ಭೋಗಪುರಂ ಮಂಡಲದ ಕೊಂಡರಾಜುಪಾಲಂ ಗ್ರಾಮದವರು ಮತ್ತು ಮೂವರು ವಿಜಯನಗರಂ ಜಿಲ್ಲೆಯ ತಿಪ್ಪಲವಲಸ ಗ್ರಾಮದವರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !