ಮಂಗಳೂರಿನ ಕಾರ್ಮಿಕರ ಶೆಡ್‌ ಬಳಿ ಮಣ್ಣು ಕುಸಿತ : 9 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಮಂಗಳೂರು ನಗರದ ಸೆಂಟ್ರಲ್‌ ಮಾರ್ಕೆಟ್‌ ನಿರ್ಮಾಣ ಕಾಮಗಾರಿ ಸ್ಥಳದಲ್ಲಿರುವ ಶೆಡ್‌ ಬಳಿ ಮಣ್ಣು ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಸೆಂಟ್ರಲ್‌ ಮಾರ್ಕೆಟ್‌ ನಿರ್ಮಾಣ ಕಾಮಗಾರಿ ಸ್ಥಳದ ಹತ್ತಿರವಿದ್ದ ಶೆಡ್‌ ಬಳಿ ಮಣ್ಣು ಕುಸಿದು ಬಿದ್ದುದರ ಪರಿಣಾಮ 9 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತದನಂತರ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್‌ ಸಿಟಿ ಯೋಜನೆಯ ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!