ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ ವರುಣನ ನರ್ತನ ಹೆಚ್ಚಾಗಿದ್ದು, ಸಾವು ನೋವಿನ ಸಂಖ್ಯೆಯೂ ಏರಿಕೆ ಕಂಡಿದೆ. ಈ ನಡುವೆಯೇ ಇಂದು ಬೆಳಗ್ಗೆ ಮತ್ತೊಂದು ದುರಂತ ಸಂಭವಿಸಿದ್ದು, ಶಿವನ ದೇವಾಲಯ ಕುಸಿದು 9 ಮಂದಿ ಜೀವ ಕಳೆದುಕೊಂಡಿರುವ ಘಟನೆ ಶಿಮ್ಲಾದಲ್ಲಿ ನಡೆದಿದೆ.
ಶಿಮ್ಲಾದ ಸಮ್ಮರ್ ಹಿಲ್ನಲ್ಲಿ ಇಂದು ಮುಂಜಾನೆ ಭಾರೀ ಭೂಕುಸಿತದಿಂದಾಗಿ ಶಿವನ ದೇವಾಲಯವೊಂದು ಕುಸಿದಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆಯಿದೆ. ಅಪಘಾತ ನಡೆದ ಸ್ಥಳದ ದೃಶ್ಯಾವಳಿಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ.
ಹಿಮಾಚಲ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬಿಯಾಸ್ ನದಿ ತುಂಬಿ ಹರಿಯುತ್ತಿದ್ದು, ಅನೇಕ ಸ್ಥಳಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜ್ಯದಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಹಲವಾರು ರಸ್ತೆಗಳನ್ನು ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದೆ.
VIDEO | A temple reportedly collapsed due to a massive landslide in Shimla's Summer Hill earlier today. Several people are feared trapped under the debris. More details are awaited.
(Source: Third Party) pic.twitter.com/IJMKUTSlwU
— Press Trust of India (@PTI_News) August 14, 2023