ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
15 ವರ್ಷದ ಶ್ರೀನಿವಾಸ್ ಒಂಬತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ, ಈ ತನ್ನ ಹಾಸ್ಟೆಲ್ ರೂಮಿನಲ್ಲಿ ಮೇಲ್ಛಾವಣಿಯ ಕಬ್ಬಿಣದ ರಾಡ್ಗೆ ಸೀರೆ ನೇತುಹಾಕಿ ಕುತ್ತಿಗೆಗೆ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶ್ರೀನಿವಾಸ್ ತಿಂಗಳ ಹಿಂದಷ್ಟೇ ಹಾಸ್ಟೆಲ್ಗೆ ಸೇರಿದ್ದ, ಬೆಳಗಿನ ಜಾವ ಸ್ನೇಹಿತರೆಲ್ಲರೂ ಮಲಗಿದ್ದ ವೇಳೆ ಶ್ರೀನಿವಾಸ್ ಆತ್ಮಹತ್ಯೆಗೆ ಶರಣಾಗಿದ್ದು, ಕೊಪ್ಪ ಠಾಣೆಯಲ್ಲಿ ದೂರು ದಾಖಲಾಗಿದೆ.