ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 9ನೇ ಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕದ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಕೋಲಾರದಲ್ಲಿ ಗೊಂದಲ ಮುಂದುವರಿದ ಕಾರಣ ಬಾಕಿ ಉಳಿಸಿಕೊಳ್ಳಲಾಗಿದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ಇದರ ಜೊತೆಗೆ ರಾಜಸ್ಥಾನದ 2 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ.
ಚಾಮರಾಜನಗರದಿಂದ ಸುನಿಲ್ ಬೋಸ್ಗೆ ಟಿಕೆಟ್ ನೀಡಲಾಗಿದೆ. ಡಿಕೆ ಶಿವಕುಮಾರ್ ಆಪ್ತ ರಕ್ಷಾ ರಾಮಯ್ಯಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇತ್ತ ಬಳ್ಳಾರಿಯಿಂದ ಇ ತುಕರಾಂ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಕಾಂಗ್ರೆಸ್ ಲೋಕಸಭಾ ಚುನಾವಣಾ ಟಿಕೆಟ್
ಚಾಮರಾಜನಗರ- ಸುನೀಲ್ ಬೋಸ್
ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ
ಬಳ್ಳಾರಿ – ಇ ತುಕಾರಾಂ
ರಾಜಸ್ಥಾನದ ಎರಡು ಕ್ಷೇತ್ರಕ್ಕೆ ಟಿಕೆಟ್ ಘೋಷಿಸಲಾಗಿದೆ.ರಾಜಸಮಂದ್ ಕ್ಷೇತ್ರದಿಂದ ಡಾ.ದಾಮೋದರ್ ಗುರ್ಜರ್, ಬಿಲ್ವಾರ ಕ್ಷೇತ್ರದಿಂದ ಡಾ.ಸಿಪಿ ಜೋಶಿಗೆ ಟಿಕೆಟ್ ನೀಡಲಾಗಿದೆ.