Sunday, September 21, 2025

ಮತ್ತೆ ಭಾರತ- ಪಾಕಿಸ್ತಾನ ಮುಖಾಮುಖಿ: ಟಾಸ್ ಗೆದ್ದ ಸೂರ್ಯ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್ ನಲ್ಲಿ ಇಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಒಮಾನ್ ವಿರುದ್ಧದ ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಹಾಗೂ ವರುಣ್ ಚಕ್ರವರ್ತಿ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಆಗಮನದೊಂದಿಗೆ ಆಡುವ ಬಳಗದಿಂದ ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಹೊರಗುಳಿದಿದ್ದಾರೆ.

ಭಾರತ ಪ್ಲೇಯಿಂಗ್ ಇಲೆವೆನ್: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್: ಸಾಹಿಬ್​ಝಾದ ಫರ್ಹಾನ್, ಸೈಮ್ ಅಯೂಬ್, ಫಖರ್ ಝಮಾನ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಸಲ್ಮಾನ್ ಅಲಿ ಅಘಾ (ನಾಯಕ), ಮೊಹಮ್ಮದ್ ನವಾಝ್, ಹುಸೈನ್ ತಲಾತ್, ಶಾಹೀನ್ ಶಾ ಆಫ್ರಿದಿ, ಫಹೀಮ್ ಅಶ್ರಫ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್.

ಇದನ್ನೂ ಓದಿ