ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ಮೈಸೂರು ದಸರಾಗೆ ಅಧಿಕೃತ ಚಾಲನೆ ಸಿಕ್ಕಿದೆ. ಸಾಹಿತಿ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಿದ್ದಾರೆ.
ಉದ್ಘಾಟನೆಯ ಬಳಿಕ ಮಾತನಾಡಿ, ಅವರು ಬೂಕರ್ ಪ್ರಶಸ್ತಿ ಬಂದಾಗ ನನ್ನ ಆಪ್ತ ಗೆಳತಿಯೊಬ್ರು ನನ್ನನ್ನು ಚಾಮುಂಡಿ ಬೆಟ್ಟಕ್ಕೆ ಕರ್ಕೊಂಡು ಬರ್ತೀನಿ ಅಂತ ಹರಕೆ ಹೊತ್ತಿದ್ರು. ಆದರೆ ಕಾರಣಾಂತರಗಳಿಂದ ನನಗೆ ಬರಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಎಷ್ಟೇ ಅಡೆ ತಡೆ ಬಂದ್ರೂ ತಾಯಿ ಚಾಮುಂಡೇಶ್ವರಿ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ ಎಂದು ಹೇಳಿದ್ದಾರೆ.
ʼಅಡೆತಡೆಗಳು ಏನೇ ಇರಲಿ, ಚಾಮುಂಡಿ ತಾಯಯೇ ನನ್ನನ್ನು ಕರೆಸಿಕೊಂಡಿದ್ದಾರೆʼ
