July 21, 2026
Tuesday, July 21, 2026
spot_img

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೂ ಸೈಬರ್ ವಂಚಕರ ಕಾಟ: ದೂರು ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೂ ಸೈಬರ್ ವಂಚಕರು ಕಾಟ ಕೊಟ್ಟಿದ್ದು, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ವಂಚನೆಗೆ ಯತ್ನಿಸಿರುವಂತ ಘಟನೆ ನಡೆದಿದೆ.

ಸೆಪ್ಟೆಂಬರ್.5ರಂದು ಕರೆ ಮಾಡಿದ ಸೈಬರ್ ವಂಚಕನೊಬ್ಬ ತಾನು ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂಬುದಾಗಿ ಪರಿಚಯಿಸಿಕೊಂಡಿದ್ದಾನೆ. ಆ ಬಳಿಕ ನಿಮ್ಮ ನಂಬರ್ ಆಧಾರ್ ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾನೆ.

ಅಲ್ಲದೇ ನಿಮ್ಮ ನಂಬರ್ ಗೆ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನು ನಿಲ್ಲಿಸಲಾಗಿದೆ ಎಂದು ಬೆದರಿಕೆ ಹಾಕಿದ್ದಾನೆ. ಹೀಗಾಗಿ ಸೈಬರ್ ವಂಚಕನ ವಿರುದ್ಧ ದೂರು ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !