January18, 2026
Sunday, January 18, 2026
spot_img

ಗಿಲ್ ನಾಯಕತ್ವದಲ್ಲಿ ಭಾರತ ಟೆಸ್ಟ್ ತಂಡ ಪ್ರಕಟ: ಮೂವರು ಕನ್ನಡಿಗರಿಗೆ ಸ್ಥಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಯುವ ಕ್ರಿಕೆಟಿಗ ಶುಭ್‌ಮನ್ ಗಿಲ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದು, ರವೀಂದ್ರ ಜಡೇಜಾ ಉಪನಾಯಕನಾಗಿ ನೇಮಕಗೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ತಂಡದಲ್ಲಿ ಇರದ ಕಾರಣ, ವಿಕೆಟ್‌ಕೀಪರ್ ಜವಾಬ್ದಾರಿಯನ್ನು ಧ್ರುವ್ ಜುರೆಲ್ ನಿರ್ವಹಿಸಲಿದ್ದಾರೆ.

ಬಿಸಿಸಿಐ ಆಯ್ಕೆ ಸಮಿತಿಯ ಅಜಿತ್ ಅಗರ್ಕರ್, ಹೆಡ್ ಕೋಚ್ ಗೌತಂ ಗಂಭೀರ್ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಮೂವರು ಕನ್ನಡಿಗರಾದ ಕೆಎಲ್ ರಾಹುಲ್, ದೇವದತ್ತ ಪಡಿಕ್ಕಲ್, ಪ್ರಸಿದ್ದ್ ಕೃಷ್ಣ ಸ್ಥಾನವನ್ನು ಪಡೆದಿದ್ದಾರೆ. ಮತ್ತೋರ್ವ ಪ್ರತಿಭಾನ್ವಿತ ಆಟಗಾರ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಿಲ್ಲ.

ತಂಡದ ಪ್ರಮುಖ ಅಂಶಗಳು

ನಾಯಕತ್ವ: ಶುಭ್‌ಮನ್ ಗಿಲ್ ಮೊದಲ ಬಾರಿಗೆ ಟೆಸ್ಟ್ ನಾಯಕತ್ವ ವಹಿಸಿಕೊಂಡಿದ್ದಾರೆ.

ಉಪನಾಯಕ: ಆಲ್‌ರೌಂಡರ್ ರವೀಂದ್ರ ಜಡೇಜಾ ಉಪನಾಯಕ.

ವಿಕೆಟ್‌ಕೀಪರ್: ಧ್ರುವ್ ಜುರೆಲ್ ಮುಖ್ಯ ವಿಕೆಟ್‌ಕೀಪರ್ ಆಗಿ, ಎನ್. ಜಗದೀಶನ್ ಬ್ಯಾಕಪ್‌ ಆಗಿದ್ದಾರೆ.

ಆರಂಭಿಕ ಬ್ಯಾಟ್ಸ್ಮನ್‌ಗಳು: ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಬೌಲಿಂಗ್ ವಿಭಾಗ: ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ

ಪ್ರಕಟವಾದ ಭಾರತ ತಂಡ: ಶುಭ್‌ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್. ಜಗದೀಸನ್ (ವಿಕೆಟ್ ಕೀಪರ್).

ಸರಣಿ ವೇಳಾಪಟ್ಟಿ
1ನೇ ಟೆಸ್ಟ್: ಅಕ್ಟೋಬರ್ 2ರಿಂದ 6ರವರೆಗೆ, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್.

2ನೇ ಟೆಸ್ಟ್: ಅಕ್ಟೋಬರ್ 10ರಿಂದ 14ರವರೆಗೆ, ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ.

ಈ ಬಾರಿ ಯುವ ಕ್ರಿಕೆಟಿಗರಿಗೆ ಹೆಚ್ಚಿನ ಅವಕಾಶ ದೊರೆತಿದ್ದು, ಮುಂದಿನ ತಲೆಮಾರಿನ ಆಟಗಾರರ ಸಾಮರ್ಥ್ಯವನ್ನು ಪರೀಕ್ಷಿಸಲು ಈ ಸರಣಿ ಉತ್ತಮ ವೇದಿಕೆಯಾಗಿದೆ.

Must Read

error: Content is protected !!