Sunday, October 12, 2025

ದೈವಾರಾದನೆ ಪವಿತ್ರವಾದ್ದು, ಅಪಹಾಸ್ಯ ಮಾಡಬೇಡಿ: ಜನರಲ್ಲಿ ಹೊಂಬಾಳೆ ಫಿಲ್ಮ್ಸ್‌ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೈವಾರಾಧನೆ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಂಪ್ರದಾಯ. ಅದನ್ನು ಹಾಸ್ಯಾಸ್ಪದವಾಗಿ ಅಣಕು ಪ್ರದರ್ಶನ ಮಾಡಬೇಡಿ ಎಂದು ‘ಕಾಂತಾರ ಚಾಪ್ಟರ್‌ 1’ ಸಿನಿಮಾ ಪ್ರೇಕ್ಷಕರಲ್ಲಿ ಹೊಂಬಾಳೆ ಫಿಲ್ಮ್ಸ್‌ ಮನವಿ ಮಾಡಿಕೊಂಡಿದೆ.

ಕಾಂತಾರ ಚಾಪ್ಟರ್‌ 1 ಸಿನಿಮಾ ಥಿಯೇಟರ್‌ಗಳಲ್ಲಿ ಕೆಲ ಪ್ರೇಕ್ಷಕರ ಅನುಚಿತ ವರ್ತನೆಗೆ ಹೊಂಬಾಳೆ ಫಿಲ್ಮ್ಸ್‌ ಬೇಸರ ವ್ಯಕ್ತಪಡಿಸಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ.

error: Content is protected !!