March 23, 2026
Monday, March 23, 2026
spot_img

ಜಾತಿಗಣತಿಗೆ ತೆರಳಿದ್ದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ: ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಮಾಜಿಕ – ಶೈಕ್ಷಣಿಕ ಸರ್ವೇ ಕಾರ್ಯಕ್ಕೆ ತೆರಳಿದ್ದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ.

ಶಿಕ್ಷಕ ಕೃಷ್ಣಪ್ಪ (54) ಅವರ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ನಾಯಿ ದಾಳಿಯಿಂದ ಅವರ ಕಾಲಿನ ಭಾಗಕ್ಕೆ ಭಾರೀ ಹಾನಿಯಾಗಿದೆ. ನಾಯಿಯ ಹಲ್ಲು ಸುಮಾರು ಒಂದು ಇಂಚು ಆಳಕ್ಕೆ ನಾಟಿದೆ. ಅವರಿಗೆ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸರ್ವೇ ಕಾರ್ಯದ ಭಾಗವಾಗಿ ಕೆಲ ಮನೆಗಳಲ್ಲಿನ ಯು.ಹೆಚ್.ಐ.ಡಿ. ನಂಬರ್ ಪೆಂಡಿಂಗ್ ತೋರಿಸುತ್ತಿತ್ತು. ಈ ಕಾರಣಕ್ಕೆ ಮೀಟರ್ ಬೋರ್ಡಿನಲ್ಲಿರುವ ಆರ್.ಆರ್ ನಂಬರ್ ಪಡೆಯಲು ಕೃಷ್ಣಪ್ಪ ಅವರು ತೆರಳಿದ್ದರು. ಈ ಸಂದರ್ಭದಲ್ಲಿ ನಾಯಿ ದಾಳಿ ನಡೆಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !