May 2, 2026
Saturday, May 2, 2026
spot_img

ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾ ಕುರಿತು ಅಶ್ಲೀಲ ಸಂದೇಶ: ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ ವಿಚಾರವಾಗಿ ನಟಿ ರಮ್ಯಾ ಬೆನ್ನಿಗೆ ಇದೀಗ ಮಹಿಳಾ ಆಯೋಗ ನಿಂತುಕೊಂಡಿದ್ದು, ರಾಜ್ಯಾಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಬೆಂಗಳೂರು ಪೊಲೀಸ್ ಕಮಿಷನರಿಗೆ ಪತ್ರ ಬರೆದಿದ್ದಾರೆ.

ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಿ, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ.

ಈ ವಿಚಾರವಾಗಿ ನಾಗಲಕ್ಷ್ಮಿ ಚೌದರಿ ಮಾತನಾಡಿದ್ದು, ಮನಸ್ಸಿಗೆ ತಕ್ಕಂತೆ ಕಮೆಂಟ್ ಮತ್ತು ಪೋಸ್ಟ್ ಮಾಡೋದು ತಪ್ಪು. ನಟಿ ರಮ್ಯಾ ನಮಗೇನು ಕಾಲ್ ಮಾಡಿಲ್ಲ ಈ ವಿಷಯಗಳಲ್ಲಿ ಯಾರು ಕಾಲ್ ಮಾಡಬೇಕು ಅಂತ ಇಲ್ಲ. ದರ್ಶನ್ ಅಭಿಮಾನಿಗಳ ವಿರುದ್ಧ ನಾನು ಮಾತನಾಡಲ್ಲ ಮಹಿಳೆಯರಿಗೆ ಅನ್ಯಾಯವಾದಾಗ ಆಯೋಗ ಬರುತ್ತದೆ ಎಂದು ನಾಗಲಕ್ಷ್ಮಿ ಚೌದರಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !