ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಅವಧಿ ಕೊನೆಯಾಗಲಿದ್ದು, ಜನ್ಮ ಜನ್ಮದಲ್ಲೂ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಸ್ಫೋಟಕವಾದ ಭವಿಷ್ಯ ನುಡಿದಿದ್ದಾರೆ.
ಹಾಸನಾಂಬ ದೇವಿ ದರುಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದು ಕೊನೆಯ ಹಂತ, ಮುಂದಿನ ದಿನಗಳಲ್ಲಿ ಪ್ರಳಯದ ಆಗುತ್ತೆ. ಉತ್ತರ ಭಾರತ, ಉತ್ತರ ಕರ್ನಾಟಕ ಭಾಗ ಮುಳುಗಡೆ ಆಗಲಿವೆ. ಕರ್ನಾಟಕ ಮೂರು ಭಾಗ, ಭಾರತ ದೇಶ ಎರಡು ಭಾಗ ಆಗುತ್ತದೆ. ಇದಕ್ಕೆಲ್ಲ ಮುನ್ಸೂಚನೆಯಾಗಿದೆ . ಇದೇ ಕೊನೆಯ ವಿಶೇಷವಾದ ಸಂದರ್ಭವಾಗಿದ್ದು ಮುಂದೆ ಆಗುವ ಉಗ್ರಸ್ವರೂಪದ ಬಗ್ಗೆ ತಾಯಿ ಸೂಚನೆ ಕೊಟ್ಟಿದ್ದಾಳೆ ಎಂದಿದ್ದಾರೆ.
ರಾಜಕೀಯದವರು ಗೊಂದಲದಲ್ಲಿ ಸಿಲುಕಲಿದ್ದು ಬಹಳಷ್ಟು ಜನ ಕಿತ್ತಾಡುತ್ತಾರೆ. ಇಡೀ ಜಗತ್ತಿನ ಇತಿಹಾಸ ಪುಟದಲ್ಲಿ ಕರ್ನಾಟಕ ರಾಜ್ಯ ಕುರ್ಚಿಗಾಗಿ ಒಡೆದಾಡಿಕೊಳ್ಳುವುದರಲ್ಲಿ ಹೆಸರುವಾಸಿಯಾಗುತ್ತೆ. ಸಂಕ್ರಾಂತಿ ಒಳಗಡೆ ಕೇತು ಮತ್ತು ಸೂರ್ಯ ರಾಹು ಜೊತೆಗೆ ಜರುಗಲಿದ್ದು, ಬಹಳ ದೊಡ್ಡ ಗಲಾಟೆಗಳು ನಡೆಯುತ್ತವೆ. ಇದರ ಜೊತೆಗೆ ಸ್ಥಾನ ಪಲ್ಲಟ, ಪಕ್ಷಪಾತ, ಭೇದ ಭಾವ ಆಗಲಿದೆ ಎಂದರು.
ಮೋದಿ ಅವರು ದೇಶದ ರಕ್ಷಾ ಕವಚವಾ ಆಗಿದ್ದಾರೆ. ಮುಂದೆ ಒಬ್ಬ ಸನ್ಯಾಸಿ ದೇಶದ ಪ್ರಧಾನಿ ಆಗಲಿದ್ದು, ದೇಶದ ಚುಕ್ಕಾಣಿ ಹಿಡಿಯುತ್ತಾರೆ. ಬ್ರಹ್ಮಚಾರಿ ಪ್ರಧಾನಿ ಆಗದಿದ್ದರೆ ಇಡೀ ಜಗತ್ತಿಗೆ ಶನಿ ಪ್ರವೇಶ ಆಗುತ್ತೆ ಎಂದು ಭವಿಷ್ಯ ನುಡಿದರು.
ರಾಜಕೀಯದವರು ಇನ್ಮೇಲೆ ಹಿಟ್ಲರ್ ರೂಲ್ ತರಲಿದ್ದಾರೆ. ಸಿದ್ದರಾಮಯ್ಯ ಅವರು ಆರೋಗ್ಯ ಕ್ಷೀಣಿಸದಂತೆ ನೋಡಿಕೊಳ್ಳಬೇಕು. ಅಲ್ಲದೇ ಕಾಂಗ್ರೆಸ್ ಅಧಿಕಾರ ಅವಧಿ ಇದೇ ಕೊನೆ, ಮುಂದೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ. ಜನರು ಆರೋಗ್ಯ ನೋಡಿಕೊಳ್ಳಬೇಕು. ಜಲಗಂಡಾಂತರ ಸಂಭವಿಸಲಿದ್ದು, ಘಟಪ್ರಭ, ಮಲಪ್ರಭಾ, ಗೋದಾವರಿ ನದಿಗಳು ದೇಶ ಎರಡು ಭಾಗ ಮಾಡುವಷ್ಟು ತುಂಬುತ್ತೆ ಎಂದು ಹೇಳಿದರು.