February 28, 2026
Saturday, February 28, 2026
spot_img

ಮಾಟ-ಮಂತ್ರದ ಹೆಸರಲ್ಲಿ ಕೋಟಿ ಕೊಳ್ಳೆ: ನಕಲಿ ಬಾಬಾನ ಹೆಡೆಮುರಿ ಕಟ್ಟಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿಧಿ ತೆಗೆದುಕೊಡುವುದಾಗಿ ನಂಬಿಸಿ ಬರೋಬ್ಬರಿ ₹1 ಕೋಟಿ 87 ಲಕ್ಷ ರೂಪಾಯಿ ವಂಚಿಸಿದ್ದ ನಕಲಿ ಬಾಬಾನನ್ನು ಸೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹ್ಮದ್ ಖಾದರ್ ಶೇಖ್ ಎಂದು ಗುರುತಿಸಲಾಗಿದೆ.

ಈತ ನಿಧಿಯ ಆಮಿಷವೊಡ್ಡಿ ಸೊಲ್ಲಾಪುರದ ಹಲವು ಜನರಿಗೆ ಮೋಸ ಮಾಡಿದ್ದು, ಆತನನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ.

ಸೊಲ್ಲಾಪುರದ ಗೋವಿಂದ ವಂಜಾರಿ ಎಂಬುವವರ ಜಮೀನಿನಲ್ಲಿ ನಿಧಿ ಇದೆ. ಅದನ್ನು ತೆಗೆದುಕೊಡುವುದಾಗಿ ಮಹ್ಮದ್ ಖಾದರ್ ಶೇಖ್ ನಂಬಿಸಿ ಅವರಿಂದ ಹಣ ಪಡೆದು ವಂಚನೆ ಮಾಡಿದ್ದ. ಈ ಕುರಿತು ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ, ಹೆಚ್ಚುವರಿ ಎಸ್ಪಿ ದತ್ತಾತ್ರೇಯ ಕಾಳೆ ನೇತೃತ್ವದ ತಂಡ ಆರೋಪಿಯ ಪತ್ತೆಗೆ ಬಲೆ ಬೀಸಿತ್ತು.

ಆರೋಪಿಯ ಮನೆಯಲ್ಲಿ ಪೊಲೀಸರು ಶೋಧ ನಡೆಸಿದಾಗ, ಮಾಟ ಮಂತ್ರಕ್ಕೆ ಉಪಯೋಗಿಸುವ ಹಲವು ಸಾಮಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !