September 13, 2026
Sunday, September 13, 2026
spot_img

ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಂಧ್ರಪ್ರದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಂದ್ಯಾಲ್ ಜಿಲ್ಲೆಯ ಶ್ರೀಶೈಲಂನಲ್ಲಿರುವ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಸುವಿನ ಹಾಲು, ಮೊಸರು, ತುಪ್ಪ, ಜೇನುತುಪ್ಪ ಮತ್ತು ಸಕ್ಕರೆಯ ಪವಿತ್ರ ಮಿಶ್ರಣವಾದ ಪಂಚಾಮೃತ ಬಳಸಿ ದೇವರಿಗೆ ರುದ್ರಾಭಿಷೇಕ ನೆರವೇರಿಸಿದರು. ನಂತರ ದೇವಾಲಯದಲ್ಲಿ ಸ್ವಲ್ಪ ಸಮಯ ಧ್ಯಾನ ಮಾಡಿ ಪ್ರಾರ್ಥನೆ ಸಲ್ಲಿಸಿದರು.

ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಇದು 52 ಶಕ್ತಿ ಪೀಠಗಳಲ್ಲಿ ಒಂದಾಗಿರುವುದರಿಂದ ವಿಶೇಷ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಇದರ ವಿಶೇಷತೆಯೆಂದರೆ ಒಂದೇ ದೇವಾಲಯ ಸಂಕೀರ್ಣದೊಳಗೆ ಜ್ಯೋತಿರ್ಲಿಂಗ ಮತ್ತು ಶಕ್ತಿ ಪೀಠವೆರಡೂ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !