April 21, 2026
Tuesday, April 21, 2026
spot_img

ದಯವಿಟ್ಟು ದೈವದ ಅನುಕರಣೆ ಮಾಡಬೇಡಿ, ಬೇಸರ ಆಗುತ್ತೆ: ನಟ ರಿಷಬ್ ಶೆಟ್ಟಿ ಮನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

‘ಕಾಂತಾರ: ಚಾಪ್ಟರ್ 1’ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಎರಡು ವಾರ ಕಳೆದರೂ ಈ ಸಿನಿಮಾದ ಹವಾ ಕಡಿಮೆ ಆಗಿಲ್ಲ.

ಇತ್ತ ಸಿನಿಮಾ ನೋಡಿದ ಬಳಿಕ ಕೆಲವರು ದೈವದ ಅನುಕರಣೆ ಮಾಡಿದ್ದಾರೆ. ಚಿತ್ರಮಂದಿರದಲ್ಲೇ ವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ದೈವವನ್ನು ನಂಬುವವರಿಗೆ ಇದರಿಂದ ಬೇಸರ ಆಗಿದೆ. ಆ ಕುರಿತು ಈಗಾಗಲೇ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ಈಗ ರಿಷಬ್ ಶೆಟ್ಟಿ ಅವರು ಮೈಸೂರಿನಲ್ಲಿ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಈ ಬಗ್ಗೆ ತುಂಬಾ ಹಿಂದೆಯೇ ಕೇಳಿಕೊಂಡಿದ್ದೆ. ಈಗಲೂ ಕೇಳಿಕೊಳ್ಳುತ್ತಿದ್ದೇನೆ ಹಾಗೂ ಮುಂದೆಯೂ ಕೇಳಿಕೊಳ್ಳುತ್ತೇನೆ. ಸಿನಿಮಾದಲ್ಲಿ ಮನರಂಜನೆಯ ಅಂಶ ಇದ್ದೇ ಇರುತ್ತದೆ. ಜನರನ್ನು ಸಿನಿಮಾ ರಂಜಿಸಬೇಕು. ದೈವದ ವಿಚಾರ ಇಟ್ಟುಕೊಂಡು ಸಿನಿಮಾ ಮಾಡಿದಾಗ ಅದು ಬರೀ ಸಿನಿಮಾ ಆಗಿ ಇರುವುದಿಲ್ಲ. ಶ್ರದ್ಧೆ ಭಕ್ತಿಯಿಂದ ಸಿನಿಮಾ ಮಾಡಿರುತ್ತೇವೆ ಎಂದು ಹೇಳಿದರು.

ಸಿನಿಮಾದ ಜನಪ್ರಿಯತೆಯನ್ನು ನೋಡಿಕೊಂಡು ಕೆಲವು ಜನರು ಚಿತ್ರಮಂದಿರದಿಂದ ಹೊರಗೆ ಬಂದು ಅನುಕರಣೆ ಮಾಡಿದಾಗ ನಾನು ಕೂಡ ಆರಾಧಕನಾಗಿ, ನಂಬುವವನಾಗಿ ನನಗೆ ಬೇಸರ ಆಗುತ್ತದೆ. ಸಿನಿಮಾ ಮಾಡುವಾಗ ನಾವು ಶಿಸ್ತುಬದ್ಧವಾಗಿ ನಡೆದುಕೊಂಡು, ಹಿರಿಯರ ಮಾರ್ಗದರ್ಶನ ತೆಗೆದುಕೊಂಡಿರುತ್ತೇವೆ. ಪ್ರತಿ ಅವಕಾಶವನ್ನು ಉಪಯೋಗಿಸಿಕೊಂಡು ನಾನು ಕೇಳಿಕೊಳ್ಳುತ್ತೇನೆ. ದಯವಿಟ್ಟು ಆ ರೀತಿ ಮಾಡಬೇಡಿ. ದೈವವನ್ನು ನಂಬುವಂತಹ ಎಲ್ಲ ಭಕ್ತರಿಗೆ ಬೇಸರ ಉಂಟು ಮಾಡುತ್ತದೆ. ಆ ರೀತಿ ಮಾಡಬೇಡಿ ಅಂತ ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !