Wednesday, October 22, 2025

ನ.2ರಂದು ಚಿತ್ತಾಪುರದಲ್ಲಿ ಪಾದಯಾತ್ರೆ ನಡೆಸಲು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಆರ್‌ಎಸ್‌ಎಸ್ ಹೊಸ ಅರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈಕೋರ್ಟ್ ನಿರ್ದೇಶನದ ಬಳಿಕ ನ.2ರಂದು ಕಲಬುರ್ಗಿಯ ಚಿತ್ತಾಪುರದಲ್ಲಿ ಶತಮಾನೋತ್ಸವ ಪಾದಯಾತ್ರೆ ನಡೆಸಲು ಅನುಮತಿ ಕೋರಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ ಕಲಬುರ್ಗಿ ಜಿಲ್ಲಾಧಿಕಾರಿಗೆ ಹೊಸ ಅರ್ಜಿ ಸಲ್ಲಿಸಿದೆ.

ಜಿಲ್ಲಾಧಿಕಾರಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ನಿಯೋಗವು ವೈಯಕ್ತಿಕವಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇಮೇಲ್ ಮತ್ತು ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸಿದೆ. ನ.2 ರಂದು ಪಾದಯಾತ್ರೆ ನಡೆಸಲು ಅನುಮತಿ ಕೋರಿ ಕಲಬುರ್ಗಿ ನ್ಯಾಯಾಲಯದ ಪೀಠವು ಹೊಸ ಅರ್ಜಿ ಸಲ್ಲಿಸುವಂತೆ ತಮಗೆ ನಿರ್ದೇಶಿಸಿದೆ ಎಂದು ಆರ್‌ಎಸ್‌ಎಸ್ ಹಿರಿಯ ಕಾರ್ಯಕಾರಿ ಅಶೋಕ್ ವಿ ಪಾಟೀಲ್ ಔಪಚಾರಿಕ ಅರ್ಜಿಯಲ್ಲಿ ತಿಳಿಸಿದ್ದಾರೆ.

error: Content is protected !!