March 15, 2026
Sunday, March 15, 2026
spot_img

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಸರ್ಕಾರಿ ಗುತ್ತಿಗೆ ಅಡುಗೆ ಸಿಬ್ಬಂದಿ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆರ್‌ಎಸ್‌ಎಸ್ ಆಯೋಜಿಸಿದ್ದ ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಬಸವಕಲ್ಯಾಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸಹಾಯಕ ಅಡುಗೆ ಸಿಬ್ಬಂದಿಯನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ.

ಪ್ರಮೋದ್ ಕುಮಾರ್ ಎಂಬುವವರು ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 20 ರಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗೆ ವಾಟ್ಸಾಪ್ ಮೂಲಕ ಬಂದ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬಸವಕಲ್ಯಾಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯು ಬೀದರ್ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯದರ್ಶಿ/ಮುಖ್ಯ ಆಡಳಿತಾಧಿಕಾರಿ ಕಚೇರಿಗೆ ಪತ್ರ ಬರೆದು, ಪ್ರಮೋದ್ ಕುಮಾರ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.

ಪ್ರಮೋದ್ ಕುಮಾರ್ ಬಸವಕಲ್ಯಾಣದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್‌ನಲ್ಲಿ ಸಹಾಯಕ ಅಡುಗೆ ಸಿಬ್ಬಂದಿಯಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದಿಂದ ಸಂಬಳ ಪಡೆಯುತ್ತಿರುವ ಕಾಯಂ/ಹೊರಗುತ್ತಿಗೆ ಸಿಬ್ಬಂದಿ ಕಾನೂನಿನ ಪ್ರಕಾರ ಯಾವುದೇ ಸಂಸ್ಥೆ ಅಥವಾ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !