July 21, 2026
Tuesday, July 21, 2026
spot_img

ಖಾಸಗಿ ಬಸ್‌ ಬೆಂಕಿಗಾಹುತಿಯಾಗಿ 20 ಸಾವು: ಸಿಎಂ ಚಂದ್ರಬಾಬು ನಾಯ್ಡು ಕಂಬನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಾಥಮಿಕ ವರದಿಗಳ ಪ್ರಕಾರ, ಕನಿಷ್ಠ 20 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ದುಬೈಗೆ ಅಧಿಕೃತ ಭೇಟಿಯಲ್ಲಿರುವ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ, ಅವರು ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿದರು. ಉನ್ನತ ಆಡಳಿತ ಸಿಬ್ಬಂದಿಗೆ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಪ್ರಯತ್ನಗಳನ್ನು ನೋಡಿಕೊಳ್ಳಲು ನಿರ್ದೇಶನ ನೀಡಿದ್ದಾರೆ.

ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸುವಂತೆ ಮತ್ತು ಮೃತರ ಕುಟುಂಬಗಳಿಗೆ ಬೆಂಬಲ ನೀಡಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದರು. ಹೆಚ್ಚಿನ ಸಾವುನೋವುಗಳನ್ನು ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳುವ ಅಗತ್ಯವನ್ನು ಹೇಳಿದ್ದು, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !