Thursday, October 30, 2025

ಅಪಘಾತ ತಪ್ಪಿಸೋಕೆ ಸಿಂಪಲ್‌ & ಎಫೆಕ್ಟೀವ್‌ ಪ್ಲ್ಯಾನ್‌ ಮಾಡಿದ ಪೊಲೀಸ್‌ ಸಿಬ್ಬಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಯಚೂರು ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳ ಸಮಸ್ಯೆಗೆ ರಾಯಚೂರು ಟ್ರಾಫಿಕ್ ಪೊಲೀಸರು ಪರಿಹಾರ ಕಂಡುಕೊಂಡಿದ್ದಾರೆ.

ನಗರ ಪಾಲಿಕೆ ಮಾಡಬೇಕಾದ ಈ ಕಾರ್ಯವನ್ನು ಟ್ರಾಫಿಕ್ ಪೊಲೀಸರು ತಾವೇ ಮುಂದೆ ನಿಂತು ಮಾಡಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್​​​ಐ ಸಣ್ಣ ವೀರೇಶ್ ಅವರ ನೇತೃತ್ವದಲ್ಲಿ ಟ್ರಾಫಿಕ್ ಸಿಬ್ಬಂದಿಯು ಮಣ್ಣು ತರಿಸಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಗುಂಡಿಗಳನ್ನು ಮುಚ್ಚಿದ್ದಾರೆ.

ಇದರಿಂದ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಈ ರಸ್ತೆ ಗುಂಡಿಗಳು ಅಪಘಾತಗಳಿಗೆ ಕಾರಣವಾಗುತ್ತಿದ್ದವು, ಆದರೆ ಪೊಲೀಸರ ಈ ಕಾರ್ಯವು ಅಪಾಯಗಳನ್ನು ತಪ್ಪಿಸಿದೆ. ಸಾರ್ವಜನಿಕರು ಟ್ರಾಫಿಕ್ ಪೊಲೀಸರ ಈ ಜನಪರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ರಾಫಿಕ್ ನಿಯಂತ್ರಣದ ಜೊತೆಗೆ ನಾಗರಿಕರ ಸುರಕ್ಷತೆ ಮತ್ತು ಸೌಕರ್ಯಕ್ಕೆ ಒತ್ತು ನೀಡಿದ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

error: Content is protected !!