Wednesday, November 5, 2025

ಹುಲಿ ದಾಳಿಯಿಂದ ರೈತ ಸಾವು: ಸಚಿವ ಈಶ್ವರ್​ ಖಂಡ್ರೆಗೆ ಮೈಸೂರಲ್ಲಿ ಘೇರಾವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ ರೈತರು ಘೇರಾವ್​ ಹಾಕಿರುವ ಪ್ರಸಂಗ ನಡೆದಿದೆ.

ರೈತ ರಾಜಶೇಖರ ಅವರ ಶವ ಇದ್ದ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಚಿವರು ಭೆಟಿ ನೀಡಿದ್ದರು. ಈ ವೇಳೆ ಘೇರಾವ್​ ಹಾಕಲಾಗಿದ್ದು, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಅಮಾನತು ಮಾಡಬೇಕು. ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಲಾಗಿದೆ.

error: Content is protected !!