April 6, 2026
Monday, April 6, 2026
spot_img

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿಯಾದ್ರೆ ಸಂತೋಷ ಪಡುತ್ತೇನೆ: ಸಚಿವ ಜಿ ಪರಮೇಶ್ವರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ನಾನು ಸ್ವಾಗತ ಮಾಡುತ್ತೇನೆ, ಸಂತೋಷ ಪಡುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಮುನಿಯಪ್ಪ ಅವರು ಸಮರ್ಥರಿದ್ದಾರೆ. ಅವರು ಸಿಎಂ ಆಗುವುದಾದರೆ ನಾನು ಸಂತೋಷ ಪಡುತ್ತೇನೆ ಎಂದಿದ್ದಾರೆ.

ತುಳಿತಕ್ಕೆ ಒಳಗಾಗಿರುವ ವರ್ಗಕ್ಕೆ ಆಡಳಿತ ಬೇಕಿದೆ. ಆ ವರ್ಗಕ್ಕೆ ಆಡಳಿತ ಸಿಗುತ್ತೆ ಎಂದರೆ ಸಂತೋಷ. ಆದರೆ ಎಲ್ಲವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಮುನಿಯಪ್ಪ ಅವರು ಎರಡು ಬಾರಿ ಎಂಪಿ ಆಗಿದ್ದಾರೆ. ಎರಡು ಬಾರಿ ಎಂಪಿಯಾಗಿರುವುದು ಸಾಮಾನ್ಯವಲ್ಲ. ಅವರು ಹಿರಿಯರಿದ್ದಾರೆ. ಅವರು ಕೇಂದ್ರದಲ್ಲಿ ಕೂಡ ಸಚಿವರಾಗಿದ್ದರು. ಕೇಂದ್ರದಲ್ಲಿ ಸಚಿವರಾದ ಬಳಿಕ ರಾಜ್ಯದಲ್ಲಿ ಸಚಿವರಾಗಿದ್ದಾರೆ. ಹಾಗಾಗಿ ಅವರು ಸಮರ್ಥರಿದ್ದು ಅವರಿಗೆ ಸಿಎಂ ಆಗುವ ಅರ್ಹತೆ ಇದೆ. ಅವರು ಸಿಎಂ ಆದರೆ ನಾನು ಸಂತೋಷ ಪಡುತ್ತೇನೆ ಎಂದರು.

ನಾವೆಲ್ಲ ಒಂದು ವರ್ಗಕ್ಕೆ ಸೇರಿದ್ದು, ಆ ವರ್ಗಕ್ಕೆ ಆಡಳಿತ ಸಿಕ್ಕರೆ ಸಂತೋಷಪಡುತ್ತೇನೆ.ಈಗ ಬಿಹಾರ ಎಲೆಕ್ಷನ್ ನಡೆಯುತ್ತಿದೆ. ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆ ಆಗುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !