ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ನಲ್ಲಿ ಪ್ರಧಾನಿ ಮೋದಿ ಪ್ರವಾಸದಲ್ಲಿ ಗಂಭೀರ ಭದ್ರತಾ ಲೋಪವಾಗಿರುವುದನ್ನು ಖಂಡಿಸಿ ಇಂದು ಸಂಜೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಯುವ ಮೋರ್ಚ ಪ್ರತಿಭಟನೆ ನಡೆಸಲಿದೆ.
ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಉದ್ದೇಶಪೂರ್ವಕವಾಗಿಯೇ ನಿನ್ನೆ ಪ್ರಧಾನಿ ಮೋದಿ ಅವರ ಪ್ರಾಣಕ್ಕೆ ಅಪಾಯ ತಂದಿದೆ. ಇದು ಪ್ರಧಾನಿ ಕಚೇರಿಯ ಮೇಲೆ ಮಾತ್ರ ಮಾಡಿದ ದಾಳಿಯಲ್ಲ, ಪ್ರಜಾಪ್ರಭುತ್ವದ ಮೇಲಾದ ದಾಳಿಯಾಗಿದೆ. ಈ ಅಪರಾಧ ಕೃತ್ಯವನ್ನು ಬಿಜೆಪಿ ಯುವ ಮೋರ್ಚ ಬಲವಾಗಿ ಖಂಡಿಸುತ್ತದೆ ಮತ್ತು ಇಂದು ಸಂಜೆ 6 ಗಂಟೆಗೆ ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದೇವೆ ಎಂದಿದ್ದಾರೆ.
Congress deliberately put life of PM at risk yesterday
This was attack not only on office of PM but on democracy itself.
BJYM strongly condemns this criminal act
BJYM will hold large Mashaal Marches at 6PM today evening at all districts across country.#BharatStandsWithModiJi
— Tejasvi Surya (@Tejasvi_Surya) January 6, 2022