ಕಾಶಿ ಮಠ ಸಂಸ್ಥಾನಕ್ಕೆ ಭೇಟಿ ನೀಡಿದ ಆರ್‌ಸ್‌ಎಸ್ ಸರಸಂಘಚಾಲಕ ಡಾ. ಭಾಗವತ್

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಇಲ್ಲಿನ ಶ್ರೀಕಾಶಿ ಮಠಕ್ಕೆ ಭೇಟಿ ನೀಡಿ, ಕಾಶಿ ಮಠಾಧೀಶ ಶ್ರೀಮದ್ ಸಮ್ಯಮೀಂದ್ರತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ಬೆಂಗಳೂರಿಗೆ ಆಗಮಿಸಿರುವ ಡಾ. ಭಾಗವತ್ ಅವರು ಕಾಶಿ ಮಠ ಸಂಸ್ಥಾನಕ್ಕೆ ಭೇಟಿ ನೀಡಿದರು. ಉಭಯ ಕುಶಲೋಪರಿ ನಡೆಸಿದ ನಂತರ, ಮಠದ ವತಿಯಿಂದ ಅವರನ್ನು ಗೌರವಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!