ಹೊಸದಿಗಂತ ವರದಿ,ವಿಜಯಪುರ:
ನೀರು ಕುಡಿಯಲು ಹೋದ ಯುವಕ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾದ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವನನ್ನು ಪವಾಡೆಪ್ಪ ಲಕ್ಷ್ಮಣ ಬಿದರಿ (27) ಎಂದು ಗುರುತಿಸಲಾಗಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ನಿವಾಸಿಯಾದ ಪವಾಡೆಪ್ಪ ಬಿದರಿ, ಕುರಿ ಮೇಯಿಸುತ್ತಿದ್ದ ವೇಳೆ, ನೀರು ಕುಡಿಯಲು ಕೃಷಿ ಹೊಂಡಕ್ಕೆ ಹೋದಾಗ ಕಾಲು ಜಾರಿ ಬಿದ್ದು ಅಸುನೀಗಿದ್ದಾನೆ.
ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.