ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮಧ್ಯಾಹ್ನ ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಗೊಂದಲ ದೂರ ಆಗಲಿದೆ.
ಕೋವಿಡ್ ತಜ್ಞರು, ಸಚಿವರು ಜತೆ ಸಭೆ ನಡೆಯಲಿದ್ದು, ತಜ್ಞರ ಸಲಹೆ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ರಾಜ್ಯದಲ್ಲಿರುವ ಕೋವಿಡ್ ಸ್ಥಿತಿ, ತಜ್ಞರು ನೀಡುವ ವರದಿ, ಪಾಸಿಟಿವಿಟಿ ದರ ಇವುಗಳನ್ನೆಲ್ಲ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡಲಿದ್ದಾರೆ.
ಜನರ ಸಂಕಷ್ಟದ ಬಗ್ಗೆಯೂ ಮಾಹಿತಿ ಇದೆ, ಅದನ್ನೂ ಗಮನದಲ್ಲಿ ಇಟ್ಟುಕೊಂಡು ಮುಂದುವರಿಯಲಿದ್ದೇವೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.