ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅಂತಿಮ‌ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮ‌ ನಮನ ಸಲ್ಲಿಸಿದರು.
ಜ. ಮಂಜುನಾಥ ಅವರ ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಕ್ಕೆ ಭೇಟಿ ನೀಡಿದ್ದ ಸಿಎಂ ನ್ಯಾಯಮೂರ್ತಿಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಸಲ್ಲಿಸಿದ ಸೇವೆಯನ್ನು ಸಿಎಂ ಸ್ಮರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!