ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ ನಿಧನರಾಗಿದ್ದಾರೆ.
ಜೋಯಿಡಾ ತಾಲೂಕಿನ ಕಾರ್ಟೋಳಿ ಗ್ರಾಮದ ಮಹಾದೇವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಜನಪದ, ಕಲೆ ಹಾಗೂ ಪರಿಸರ ರಕ್ಷಣೆಗೆ ಹೆಚ್ಚಿದ ಆದ್ಯತೆ ನೀಡಿದ್ದರು. ಅವರ ನಿಸ್ವಾರ್ಥ ಸೇವೆಗೆ ರಾಜ್ಯಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
ಮಹಾದೇವ ಅವರು ನೂರಾರು ಬಗೆಯ ಗೆಡ್ಡೆ ಗೆಣಸುಗಳನ್ನು ಉಳಿಸಿ, ಬೆಳೆಸಿದ್ದಾರೆ. ಜೊತೆಗೆ ಅರಣ್ಯ ಸಂರಕ್ಷಣೆಯ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಸಾವಿರಕ್ಕೂ ಹೆಚ್ಚು ಜನಪದ ಗೀತೆಗಳನ್ನು ಮಹಾದೇವ ಅವರು ಸರಾಗವಾಗಿ ಹಾಡುತ್ತಿದ್ದರು. ಮಹಾದೇವ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.