ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ್ದಾರೆ.
ಇದೇ ಮೊದಲ ಬಾರಿಗೆ ಸಿನಿಮಾವೊಂದಕ್ಕೆ ಬಿಎಸ್ವೈ ಬಣ್ಣ ಹಚ್ಚಿದ್ದು, ಶೂಟಿಂಗ್ ನಡೆಯುತ್ತಿದೆ. ನಿರ್ದೇಶಕ ಹರೀಶ್ ಎಂ.ಡಿ. ಹಳ್ಳಿ ತನುಜಾ ಶೀರ್ಷಿಕೆಯ ಸಿನಿಮಾಗೆ ಕೈ ಹಾಕಿದ್ದಾರೆ.
ಇದೊಂದು ನೈಜ ಕಥೆ ಆಧಾರಿತ ಸಿನಿಮಾ. ಕೋವಿಡ್ ಸಂದರ್ಭದಲ್ಲಿ ನೀಟ್ ಪರೀಕ್ಷೆ ಬರೆಯಲು ಸುಮಾರು 350 ಕಿ.ಮೀ. ದೂರ ಪ್ರಯಾಣ ಮಾಡಿ ಗಮನಸೆಳೆದಿದ್ದ ಹುಡುಗಿಯ ಕಥೆ ಇದಾಗಿದೆ. ಪರೀಕ್ಷೆ ಬರೆಯಲು ಸಾಧ್ಯವಾಗದೇ ತನುಜಾ ಒದ್ದಾಡಿದ್ದು, ಪತ್ರಕರ್ತ ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಕಾರದಿಂದ ಪರೀಕ್ಷೆ ಬರೆದಿದ್ದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದರು. ಹಾಗಾಗಿ ಅವರೇ ಈ ಪಾತ್ರ ನಿರ್ವಹಿಸುತ್ತಿದ್ದಾರೆ.