Sunday, November 2, 2025

ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ಗೆ ನಿರೀಕ್ಷಣಾ ಜಾಮೀನು

ಹೊಸ ದಿಗಂತ ಡಿಜಿಟಲ್ ಡೆಸ್ಕ್:


ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಸಿಸಿಹೆಚ್ 82ರ ಜಡ್ಜ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಬಂಧನ ಭೀತಿಯಿಂದ ಪಾರಾಗಿದ್ದಾರೆ.

ಸಿಐಡಿ ನೋಟಿಸ್ ಹಿನ್ನೆಲೆ ಬಂಧನ ಭೀತಿಯಿಂದ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಸಿಸಿಹೆಚ್ 82ರ ಜಡ್ಜ್ ಸಂತೋಷ್ ಗಜಾನನ ಭಟ್​​, ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಸಂಬಂಧ ಇತ್ತೀಚೆಗೆ ಎಸ್​​ಐಟಿ ಅಧಿಕಾರಿಗಳ ತಂಡ ಸುಭಾಷ್ ಗುತ್ತೇದಾರ್ ಮನೆ ಸೇರಿದಂತೆ ಮೂರು ಕಡೆಗಳಲ್ಲಿ ದಾಳಿ ಮಾಡಿತ್ತು.

ಇನ್ನು ಮತಗಳ್ಳತನದ ಬಗ್ಗೆ ಇತ್ತೀಚೆಗಷ್ಟೇ ಸ್ಪಷ್ಟನೆ ಕೊಟ್ಟಿದ್ದ ಸುಭಾಷ್ ಗುತ್ತೇದಾರ್, ಯಾವ ಮತಗಳ್ಳತನವೂ ಆಗಿಲ್ಲ, ಎಲ್ಲವೂ ಸುಳ್ಳು ಅಂದಿದ್ದರು.

error: Content is protected !!