ಟಾಸ್​ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ: ದೀಪಕ್​ ಹೂಡ ಪಾದಾರ್ಪಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ವಿರುದ್ದದ ಮೊದಲ ಟಿ. 20 ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಬಾಲಿಂಗ್ ಆಯ್ದುಕೊಂಡಿದೆ.
ವಿಂಡೀಸ್ ವಿರುದ್ದದ ಸರಣಿಯಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಮತ್ತು ಗಾಯದಿಂದ ಮೂರು ತಿಂಗಳ ಕಾಲ ಕ್ರಿಕೆಟ್​ನಿಂದ ದೂರವಿದ್ದ ರವೀಂದ್ರ ಜಡೇಜಾ ಮತ್ತೆ ತಂಡ ಸೇರಿಕೊಂಡಿದ್ದಾರೆ. ಸಂಜು ಸಾಮ್ಸನ್​ ದೀರ್ಘ ಸಮಯದ ನಂತರ ಭಾರತ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇನ್ನು ವಿಂಡೀಸ್ ವಿರುದ್ಧ ಕೊನೆಯ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಭುವನೇಶ್ವರ್​, ಯುಜ್ವೇಂದ್ರ ಚಹಲ್​ ಇಂದು ಕಣಕ್ಕಿಳಿದಿದ್ದಾರೆ
ಭಾರತದ ಪರ ಆಲ್​ರೌಂಡರ್​ ದೀಪಕ್​ ಹೂಡ ಪದಾರ್ಪಣೆ ಮಾಡಿದ್ದಾರೆ. ರುತುರಾಜ್ ಗಾಯಕ್ವಾಡ್​ ಮಣಿಕಟ್ಟು ಗಾಯದ ಕಾರಣ ಕೊನೆಯ ಕ್ಷಣದಲ್ಲಿ ಪಂದ್ಯದಿಂದ ಹೊರಗುಳಿದಿದ್ದಾರೆ. ಇಂದಿನ ಪಂದ್ಯದಲ್ಲೂ ಕೂಡ ಇಶಾನ್ ಕಿಶನ್​ ನಾಯಕ ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್​ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!