ದಿಗಂತ ವರದಿ ಚಿತ್ರದುರ್ಗ:
ತಮಟಕಲ್ ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ತಮಟಕಲ್ ಗ್ರಾಮದ ಬಳಿಯ ಹೊಸ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ರಾತ್ರಿ 8 ಗಂಟೆ ವೇಳೆ ಈ ಘಟನೆ ನಡೆದಿದ್ದು ರಸ್ತೆ ದಾಟುವಾಗ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಬೀರವಾಗಿ ಗಾಯಗೊಂಡ ಚಿರತೆ ಸ್ಥಳದಲ್ಲೆ ಸಾವನ್ನಪ್ಪಿದೆ. ಮೃತ ಚಿರತೆಯು 2 ವರ್ಷ ಪ್ರಾಯದ್ದು, ಆಡುಮಲ್ಲೇಶ್ವರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸುಟ್ಟು ಹಾಕಲಾಯಿತು ಎನ್ನಲಾಗಿದೆ.