ದಿಗಂತ ವರದಿ ಕಲಬುರಗಿ:
ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷೀತವಾಗಿ ಭಾರತಕ್ಕೆ ತರುವ ವ್ಯವಸ್ಥೆ ಮಾಡಲಾಡುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸೀನಿಯರ್ ಐಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿ ಆವರು ಭಾರತೀಯರ ಸುರಕ್ಷಿತ ದೃಷ್ಟಿಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡುತ್ತಿದ್ದಾರೆ. ದಿಡೀರನೇ ಆಗಿರುವ ಬೆಳವಣಿಗೆಯಿಂದ ಆತಂಕ ಇದಗ ಎಂದು ಕಳವಳ ವ್ಯಕ್ತಪಡಿಸಿದರು.
ಇನ್ನೂ ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.