ಹೊಸದಿಗಂತ ವರದಿ, ಮದ್ದೂರು:
ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಗೆರೆಪುರ ಗೇಟ್ ಬಳಿ ಶನಿವಾರ ಜರುಗಿದೆ.
ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲೂಕಿನ ಸತ್ಯಗಾಲದ ಗಾಣಿಗರ ಬೀದಿ ನಿವಾಸಿ ಮಹದೇವ ಶೆಟ್ಟಿ ಪುತ್ರ ಎಂ. ನಾಗಸುಂದರ್ (31) ಮೃತಪಟ್ಟ ಬೈಕ್ ಸವಾರ.
ಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ನಾಗಸುಂದರ, ಸ್ವಗ್ರಾಮ ಸತ್ಯಗಾಲಕ್ಕೆ ತಮ್ಮ ಬೈಕ್ನಲ್ಲಿ ತೆರಳುತ್ತಿದ್ದರು. ಹುಲಿಗೆರೆಪುರ ಗೇಟ್ನ ಮಳವಳ್ಳಿ-ಮದ್ದೂರು ರಸ್ತೆಯಲ್ಲಿ ಮಳವಳ್ಳಿ ಕಡೆಯಿಂದ ವೇಗವಾಗಿ ಬಂದ ಜೀಪು ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ನಾಗಸುಂದರ ಸ್ಥಳದಲ್ಲೇ ಅಸುನೀಗಿದ್ದಾನೆ.
ಈ ಸಂಬಂಧ ಕೆ.ಎಂ. ದೊಡ್ಡಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್ ಹಾಗೂ ಪಿಎಸ್ಐ ಬೆಳಗುಲಿ ಮಹದೇವಪ್ಪ ಸ್ಥಳ ಪರಿಶೀಲನೆ ನಡೆಸಿದರು.